ಶ್ರೀರಂಗಪಟ್ಟಣ : ಬಸ್ - ಬೈಕ್ ಮುಖಾಮುಖಿ ಢಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು
Update: 2019-06-22 09:40 GMT
ಮಂಡ್ಯ: ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಬನ್ನಹಳ್ಳಿ ಗ್ರಾಮದ ಸತೀಶ್ (17), ಮಹೇಂದ್ರ (16) ಸಾವಿಗೀಡಾದ ವಿದ್ಯಾರ್ಥಿಗಳು. ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.