×
Ad

ಕೈಕಾಲು ಕಳೆದುಕೊಂಡ ಇಂಜಿನಿಯರಿಂಗ್ ಪದವೀಧರನಿಗೆ 5 ಲಕ್ಷ ರೂ.ಪರಿಹಾರ ಚೆಕ್ ವಿತರಣೆ

Update: 2019-06-22 20:08 IST

ಯಾದಗಿರಿ, ಜೂ. 22: ಅಪಘಾತವೊಂದರಲ್ಲಿ ಒಂದೂವರೆ ವರ್ಷದ ಹಿಂದೆ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರ ತಂದೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಗುರುಮಿಠಕಲ್ ತಾಲೂಕಿನ ಚಂಡ್ರಕಿಯಲ್ಲಿ 5 ಲಕ್ಷ ರೂ.ಗಳ ಪರಿಹಾರದ ಚೆಕ್ ಹಸ್ತಾಂತರಿಸಿದರು.

ನಿನ್ನೆ ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು 30 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು.

ಅಹವಾಲು ಸ್ವೀಕರಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಲೇ ಸ್ಪಂದಿಸಿ ಶನಿವಾರ ಬೆಳಗ್ಗೆ ಬಂದು 5 ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು. ಕೊಟ್ಟ ಭರವಸೆಯಂತೆ ಇಂದು ಬೆಳಗ್ಗೆ ಪರಿಹಾರದ ಚೆಕ್‌ನ್ನು ಸಿಎಂ ಹಸ್ತಾಂತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News