ರಾಜಧಾನಿಯ ಪಬ್‌ಗಳಿಗೆ ಬಿಸಿ ಮುಟ್ಟಿಸಿದ ನೂತನ ಆಯುಕ್ತ

Update: 2019-06-22 17:56 GMT
ಅಲೋಕ್ ಕುಮಾರ್

ಬೆಂಗಳೂರು, ಜೂ.22: ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿರುವ ಪಬ್‌ಗಳಿಗೆ ನಗರದ ನೂತನ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಶುಕ್ರವಾರ ರಾತ್ರಿ ಕಾರ್ಯಾಚರಣೆ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.

ಇತ್ತೀಚಿಗಷ್ಟೇ, ಪಬ್ ಮತ್ತು ಬಾರ್‌ಗಳಿಂದ ಶಬ್ದಮಾಲಿನ್ಯ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಶಬ್ದಮಾಲಿನ್ಯ ಮಾಪನದ ವಿಧಾನದಲ್ಲೇ ದೋಷ ಎಂದು ಹೈಕೋರ್ಟ್ ಕಿಡಿಕಾರಿತ್ತು. ಈ ಹಿನ್ನೆಲೆಯಲ್ಲಿ ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ನಗರದ ಚರ್ಚ್ ಸ್ಟ್ರೀಟ್, ಎಂಜಿ ರಸ್ತೆಯ ಕೆಲ ಪಬ್ ಮಾಲಕರಿಗೆ ಬಿಸಿ ಮುಟ್ಟಿಸಿ, ಪರವಾನಿಗೆ ಪಡೆಯದೆ ಡಿ.ಜೆ ಬಳಸುತ್ತಿದ್ದ ಪಬ್‌ಗಳಿಗೆ ನೋಟಿಸ್ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News