ಕಬ್ಬಿಣದ ಸರಳುಗಳು ವಿದ್ಯುತ್ ತಂತಿಗೆ ತಗುಲಿ ಕಾರ್ಮಿಕ ಮೃತ್ಯು

Update: 2019-06-22 18:11 GMT

ಮೈಸೂರು,ಜೂ.22: ಕಬ್ಬಿಣದ ಸರಳುಗಳನ್ನು ಸಾಗಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಗರದ ಉದಯಗಿರಿಯಲ್ಲಿ ನಡೆದಿದೆ.

ಮೃತರನ್ನು ಕಡುವಿನಕಟ್ಟೆ ನಿವಾಸಿ ಲೋಕೇಶ್(32) ಎಂದು ಗುರುತಿಸಲಾಗಿದೆ. ಇವರು ಉದಯಗಿರಿಯ ನಿವಾಸಿ ಅಸ್ಲಂ ಪಾಷಾ ಎಂಬವರ ಮನೆ ನಿರ್ಮಾಣದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಟಾರಸಿಗೆ ಕಬ್ಬಿಣಗಳನ್ನು ಸಾಗಿಸುವಾಗ ಹತ್ತಿರದಲ್ಲೇ ಹಾದು ಹೋದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ತಗುಲಿ ವಿದ್ಯುತ್ ಪ್ರವಹಿಸಿದ ಕಾರಣ ಅವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News