ದಲಿತ ಮುಖಂಡನಿಗೆ ಮಾರಣಾಂತಿಕ ಹಲ್ಲೆ: ಆಸ್ಪತ್ರೆಗೆ ದಾಖಲು

Update: 2019-06-23 12:32 GMT

ಕೋಲಾರ, ಜೂ.23: ಅಂಬೇಡ್ಕರ್ ಸೇವಾ ಸಮಿತಿ ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ವಿಶ್ವನಾಥ್ ಅವರಿಗೆ ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಗೌನಿಪಲ್ಲಿ ಪೋಲಿಸ್ ಠಾಣಾ ವ್ಯಾಪ್ತಿಯ ತಿಮ್ಮಿನಪಲ್ಲಿ ಗ್ರಾಮದಲ್ಲಿ ನಡೆದಿದೆ.

ಶನಿವಾರ ರಾತ್ರಿ ತಿಮ್ಮಿನಪಲ್ಲಿಯ ವಿಶ್ವನಾಥ್ ಅವರ ಮನೆಯ ಮೇಲೆ ಅದೇ ಗ್ರಾಮದ ಶಿವಾರೆಡ್ಡಿ, ಮಂಜುನಾಥ್ ರೆಡ್ಡಿ, ಚೌಡರೆಡ್ಡಿ ಹಾಗೂ ಶಂಕರಪ್ಪ ಎಂಬವರು ವಿಶ್ವನಾಥ್ ಅವರ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಬಗ್ಗೆ ಗೌನಿಪಲ್ಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ರೌಡಿ ಪಟ್ಟಿ ತೆರೆದು ಗಡಿಪಾರು ಮಾಡಿ ಎಂದು ಒತ್ತಾಯಿಸಿ ಕೋಲಾರದಿಂದ ಶ್ರೀನಿವಾಸಪುರದ ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುವುದು ಎಂದು ಅಂಬೇಡ್ಕರ್ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News