ಕೆಲ್ಲಪುತ್ತಿಗೆಯಲ್ಲಿ ಅಕ್ರಮ ಗೋ ಸಾಗಾಟ: ಬಜರಂಗದಳ ಕಾರ್ಯಕರ್ತ ಸೆರೆ

Update: 2019-06-23 16:13 GMT

ಮೂಡುಬಿದಿರೆ: ಇಲ್ಲಿಗೆ ಸಮೀಪದ ಕೆಲ್ಲಪುತ್ತಿಗೆಯಲ್ಲಿ ಬಜರಂಗದಳ ಕಾರ್ಯಕರ್ತ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣ ಶನಿವಾರ ತಡರಾತ್ರಿ ಬೆಳಕಿಗೆ ಬಂದಿದ್ದು, ಆತನನ್ನು ಬಂಧಿಸಲಾಗಿದೆ.

ಬಜರಂಗದಳ ಕಾರ್ಯಕರ್ತ ವಸಂತ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಗೋ ಸಾಗಾಟದ ರೂವಾರಿ ಬಿಜಿಪಿ ಮುಖಂಡ ಶೇಖರ್ ಹೆಗಡೆ ಈ ಸಂದರ್ಭ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಹೇಳಿಕೆ

ದನಗಳನ್ನು ಮಾರಾಟಗಾರನಿಂದ ಖರೀದಿಸಿಯೇ ಸಾಗಾಟಕ್ಕೆ ಸಿದ್ಧತೆ ನಡೆದಿತ್ತು. ಇದು ಅಕ್ರಮ ಸಾಗಾಟವಲ್ಲ ಎಂಬುದು ಆರೋಪಿಗಳ ಹೇಳಿಕೆಯಿಂದ ಸ್ಪಷ್ಟವಾಗಿದೆ. ಹಾಗಾಗಿ ವಶಪಡಿಸಿಕೊಂಡಿದ್ದ ಆರೋಪಿಗಳನ್ನು ವಿಚಾರಣೆಗೊಳಪಡಿಸಿ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ಮೂಡುಬಿದಿರೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News