ಎಸ್ಸಿ-ಎಸ್ಟಿ ಆಯೋಗದ ಅಧ್ಯಕ್ಷರಾಗಿ ಎಚ್.ಡಿ.ಅಮರನಾಥನ್ ನೇಮಕ

Update: 2019-06-23 14:37 GMT

ಬೆಂಗಳೂರು, ಜೂ.23: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ (ಎಸ್ಸಿ-ಎಸ್ಟಿ) ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಎಚ್.ಡಿ.ಅಮರನಾಥನ್ ರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಅಮರನಾಥನ್ ದಲಿತ ವಿದ್ಯಾರ್ಥಿ ಒಕ್ಕೂಟ ಸೇರಿದಂತೆ ದಲಿತ ಪರ ಚಳವಳಿಗಳ ಮೂಲಕ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು.

ಎಸ್ಸಿ-ಎಸ್ಟಿ ಆಯೋಗದ ಅಧ್ಯಕ್ಷರ ಹುದ್ದೆ ಒಂದು ವರ್ಷದಿಂದ ಖಾಲಿ ಇತ್ತು. ಈ ಸ್ಥಾನಕ್ಕೆ ಎಚ್.ಡಿ.ಅಮರನಾಥನ್‌ರನ್ನು ನೇಮಕ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಾಜಶ್ರೀ ಎಚ್.ಕುಲಕರ್ಣಿ ಅವರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News