ಎಚ್.ವಿಶ್ವನಾಥ್ ಏನೇನೋ ಹೇಳಿಕೆ ಕೊಟ್ಟು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ: ಸಚಿವ ಜಿ.ಟಿ.ದೇವೇಗೌಡ

Update: 2019-06-23 15:36 GMT
ಎಚ್.ವಿಶ್ವನಾಥ್- ಜಿ.ಟಿ.ದೇವೇಗೌಡ

ಮೈಸೂರು,ಜೂ.23: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿ ಈಗ ಏನೇನೊ ಹೇಳಿಕೆ ಕೊಟ್ಟು ಪ್ರಚಾರ ಪಡೆದುಕೊಳ್ಳುತ್ತಿರುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿರುಗೇಟು ನೀಡಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ವಿಶ್ವನಾಥ್ ಅವರು ಹಿರಿಯರು. ಇಷ್ಟ ಇದ್ರೆ ಇರಿ, ಹೋಗೋದಾದರೆ ಹೋಗಿ ಎಂಬ ಹೇಳಿಕೆ ನೀಡುವ ಅಧಿಕಾರ ಯಾರಿಗೂ ಇಲ್ಲ. ಸಮ್ಮಿಶ್ರ ಸರ್ಕಾರ ನಾಲ್ಕು ವರ್ಷ ಸುಭದ್ರವಾಗಿರಲಿದೆ. ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಿಎಂ ಕೂಡ ಸರ್ಕಾರ ಸುಭದ್ರ ಎಂದು ಹೇಳಿದ್ದಾರೆ. ಪಕ್ಷದ ಸಂಘಟನೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಚಿಂತನೆ ನಡೆಸುತ್ತಿದ್ದಾರೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ದೇಶದ ಅಭಿವೃದ್ದಿ ಮಾಡಲು ಅವರು ಮುಂದಾಗಿದ್ದಾರೆ. ಇತ್ತ ರಾಜ್ಯದಲ್ಲಿ ಸರ್ಕಾರ ಉರುಳಿಸುವ ಯತ್ನವನ್ನು ಬಿಜೆಪಿ ಕೈಬಿಟ್ಟಿದೆ. ಹೀಗಿರುವಾಗ ಕಾಂಗ್ರೆಸ್-ಜೆಡಿಎಸ್ ಪಕ್ಷದವರು ಅಣ್ಣ ತಮ್ಮಂದಿರಂತೆ ಇರಬೇಕು. ಏನೇ ಸಮಸ್ಯೆಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕೇ ಹೊರತು ಏನೇನೋ ವಿವಾದಾತ್ಮಕ ಹೇಳಿಕೆಗಳನ್ನು ಯಾರೂ ಕೂಡ ನೀಡಬಾರದು ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News