​ಅಕ್ರಮ ಮರಳುಗಾರಿಕೆ: ವಾಹನ ವಶ

Update: 2019-06-23 16:40 GMT

ಗಂಗೊಳ್ಳಿ, ಜೂ.23: ಗಂಗೊಳ್ಳಿ ಗ್ರಾಮದ ಮ್ಯಾಂಗನೀಸ್ ರಸ್ತೆಯ ಪಂಚ ಗಂಗಾವಳಿ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿ ಮರಳು ಸಹಿತ ವಾಹನವನ್ನು ಗಂಗೊಳ್ಳಿ ಪೊಲೀಸರು ಜೂ.22ರಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸ್ ದಾಳಿ ವೇಳೆ ವಾಹನಕ್ಕೆ ಮರಳು ತುಂಬಿಸುತ್ತಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದು, ವಾಹನ ಮತ್ತು ಅದರಲ್ಲಿದ್ದ 3 ಸಾವಿರ ರೂ. ಮೌಲ್ಯದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News