ಕಾರುಗಳ ನಡುವೆ ಅಪಘಾತ: ಓರ್ವ ಮೃತ್ಯು
Update: 2019-06-23 16:54 GMT
ಶಿವಮೊಗ್ಗ, ಜೂ. 23: ಮಾರುತಿ ಓಮ್ನಿ ಹಾಗೂ ರಿಟ್ಝ್ ಕಾರಿನ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೊಬ್ಬಿ ನ್ಯೂ ಲೇಔಟ್ ಹತ್ತಿರ ನಡೆದಿದೆ.
ಮಾರುತಿ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ಸುಬ್ರಹ್ಮಣ್ಯ ಮೃತಪಟ್ಟವರೆಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಘಟನೆಯಲ್ಲಿ ಮಾರುತಿ ಓಮ್ನಿ ಕಾರು ಚಾಲಕನ ಎರಡು ಕಾಲುಗಳಿಗೆ ಹೊಡೆತ ಬಿದ್ದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.