ಗೃಹಿಣಿ ಆತ್ಮಹತ್ಯೆಗೆ ಶರಣು

Update: 2019-06-23 16:55 GMT

ಶಿವಮೊಗ್ಗ, ಜೂ. 23: ಮನೆಯಲ್ಲಿಯೇ ಗೃಹಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗಾಡಿಕೊಪ್ಪ ಬಡಾವಣೆಯಲ್ಲಿ ನಡೆದಿದೆ. 

ಚೆನ್ನಮ್ಮ ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ. ಇವರಿಗೆ ಪರಿಚಯವಿದ್ದ ಯೋಗೇಶ್ ಎಂಬಾತ, ಅವ್ಯಾಚ್ಯ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದರು. ಈತನ ಹಿಂಸೆ ತಾಳಲಾರದೆ, ಜೀವನದಲ್ಲಿ ಜಿಗುಪ್ಸೆಗೊಂಡು ಚೆನ್ನಮ್ಮರವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರ ಕುಟುಂಬದವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News