ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Update: 2019-06-24 17:25 GMT
ಮಂಡ್ಯ, ಜೂ.24: ಶ್ರೀರಂಗಪಟ್ಟಣ ತಾಲೂಕು ಬಳ್ಳೇಕೆರೆ ಗ್ರಾಮದ ಬಳಿ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಅಭಿಷೇಕ್(22) ಮೃತ ಯುವಕ. ಈತ ಗಾರೆ ಕೆಲಸ ಮಾಡಿಕೊಳ್ಳುತ್ತಿದ್ದು, ಯುವತಿವೋರ್ವಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಮೃತನ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.