ಯುವಕನ ಥಳಿಸಿ ಕೊಂದ ಪ್ರಕರಣ: 11 ಮಂದಿಯ ಬಂಧನ, ವೈದ್ಯರ ಕೈವಾಡದ ಶಂಕೆ
Update: 2019-06-25 08:34 GMT
ರಾಂಚಿ, ಜೂ.25: ಯುವಕನೋರ್ವನನ್ನು ‘ಜೈ ಶ್ರೀರಾಂ’ ಎಂದು ಹೇಳಿಸಿ ಥಳಿಸಿ ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 11 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ವೈದ್ಯರ ಕೈವಾಡದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಲಾಗಿದ್ದು, ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ನಡೆಸಿದ್ದ ವೈದ್ಯರು ತಕ್ಷಣ ಚಿಕಿತ್ಸೆ ನೀಡುವಂತೆ ಹೇಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ.