ಮೀಸಲಾತಿ ಪ್ರಮಾಣ ಹೆಚ್ಚಿಸಲು ಕ್ರಮ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

Update: 2019-06-25 11:14 GMT

ಬೆಂಗಳೂರು, ಜೂ.25: ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಲು ಸರಕಾರ ತೀರ್ಮಾನಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭರವಸೆ ನೀಡಿದ್ದಾರೆ.

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸುತ್ತಿದ್ದ ವಾಲ್ಮೀಕಿ ಜನಾಂಗ ಸೇರಿದಂತೆ ಪರಿಶಿಷ್ಟ ಪಂಗಡದ ಸಮುದಾಯದವರನ್ನು ಭೇಟಿಯಾಗಿ ಅವರು ಮಾತನಾಡುತ್ತಿದ್ದರು.

ಶೋಷಣೆಗೆ ಒಳಗಾದ ಸಮುದಾಯಕ್ಕೆ  ಸಂವಿಧಾನದಲ್ಲಿ ಮೀಸಲಾತಿ ಇದೆ. ಪರಿಶಿಷ್ಟ ಪಂಗಡಕ್ಕೆ ಈಗಿರುವ ಮೀಸಲಾತಿ ಶೇ. 3.5 ಪ್ರಮಾಣವನ್ನು ಶೇ.7.5 ಮೀಸಲಾತಿಗೆ ನೀವೆಲ್ಲ ಅರ್ಹರು. ಹೀಗಾಗಿ, ಸರಕಾರ  ಮೀಸಲಾತಿ ನೀಡಲು ಸಮಿತಿ ರಚಿಸಲು ನಿರ್ಧರಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ಸಮಿತಿ ರಚನೆ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಎರಡು ತಿಂಗಳ ಅವಧಿಯಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News