ಕಾಂಗ್ರೆಸ್ ಬಲವರ್ಧನೆ ವರುಣಾ ಕ್ಷೇತ್ರಕ್ಕೆ ಸೀಮಿತವಲ್ಲ: ಸಿದ್ದರಾಮಯ್ಯ

Update: 2019-06-25 12:50 GMT

ಬೆಂಗಳೂರು, ಜೂ.25: ಕಾಂಗ್ರೆಸ್ ಪಕ್ಷದ ಬಲವರ್ಧನೆಯ ಅಭಿಯಾನ ವರುಣಾ ಕ್ಷೇತ್ರಕ್ಕೆ ಸೀಮಿತ ಅಲ್ಲ, ಅಲ್ಲಿನ ಚಿಂತೆಯೂ ನನಗಿಲ್ಲ. ಚುನಾವಣಾ ಸೋಲಿನ ನಂತರ ಇಡೀ ರಾಜ್ಯದಲ್ಲಿ ನಮ್ಮ ಪಕ್ಷದ ನಾಯಕರಿಂದ ಈ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತವಾಗಿ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ನಡೆಸುತ್ತಿರುವ ಮುಖಂಡರ ಸಭೆ ಬಗ್ಗೆ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವ್ಯಾಖ್ಯಾನಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಅವರು ಟ್ವಿಟ್ ಮಾಡುವ ಮೂಲಕ ಸ್ಪಷ್ಟಣೆ ನೀಡಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರನ್ನು ಸ್ಮರಿಸಿಕೊಂಡಿರುವ ಸಿದ್ದರಾಮಯ್ಯ, ದೇಶದ ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರಿವರ್ತನೆಯ ಹೊಸ ಶಖೆಗೆ ಕಾರಣರಾದ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಹುಟ್ಟುಹಬ್ಬದ ದಿನವಾದ ಇಂದು ಗೌರವದಿಂದ ನೆನೆಯುತ್ತೇನೆ. ಮಂಡಲ್ ವರದಿ ಜಾರಿಗೊಳಿಸಿ ಹಿಂದುಳಿದ ವರ್ಗವನ್ನು ರಾಜಕೀಯ ಮತ್ತು ಆರ್ಥಿಕವಾಗಿ ಬಲಗೊಳಿಸಿದ ನಾಯಕ ಈ ಮಹಾರಾಜ ಎಂದು ಟ್ವಿಟ್ ಮಾಡಿ ಗೌರವ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News