ಹನೂರು: ರಸ್ತೆ ಬದಿಗೆ ಜಾರಿದ ಕೆಎಸ್ಆರ್ಟಿಸಿ ಬಸ್; ಐವರಿಗೆ ಗಾಯ

Update: 2019-06-25 13:19 GMT

ಹನೂರು, ಜೂ.25: ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ್ದು, ಕೂದಲೆಳೆ ಅಂತರದಲ್ಲಿ ಹಳ್ಳಕ್ಕೆ ಉರುಳುವುದು ತಪ್ಪಿದೆ. ಈ ಘಟನೆ ಹನೂರು ತಾಲೂಕಿನ ಕೋಣನಕೆರೆ ಹಾಗೂ ತಾಳಬೆಟ್ಟ ಗ್ರಾಮಗಳ  ಮಾರ್ಗಮಧ್ಯೆ ನಡೆದಿದೆ.

ಈ ವೇಳೆ ಬಸ್ ಚಾಲಕ ಹಾಗೂ ಕಂಡೆಕ್ಟರ್ ಸೇರಿ ಐವರಿಗೆ ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕೊಳ್ಳೇಗಾಲ ತಾಲೂಕಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News