ದೇವಳಗಳ ವ್ಯವಸ್ಥಾಪನಾ ಸಮಿತಿ ನೇಮಕ: ದತ್ತಿ ಇಲಾಖೆಯಿಂದ ಅರ್ಜಿ ಆಹ್ವಾನ

Update: 2019-06-25 14:05 GMT

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು  ಮಹಾಲಿಂಗೇಶ್ವರ ದೇವಾಲಯ ಮತ್ತು ಗಯಾಪದ ಕ್ಷೇತ್ರ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ ಸೇರಿದಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎ.ಬಿ.ಸಿ. ದರ್ಜೆಯ ದೇವಾಲಯಗಳ ನೂತನ ವ್ಯವಸ್ಥಾಪನಾ ಸಮಿತಿಗಳ ಸದಸ್ಯರ ನೇಮಕಕ್ಕೆ ಸರಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ ಎಂದು ಇಲಾಖಾ ಮೂಲಗಳು ತಿಳಿಸಿವೆ. 

ಜೂನ್ 23ರಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯ ಅಧಿಕಾರಾವಧಿ ಕೊನೆಗೊಂಡಿದ್ದು, ಆಡಳಿತಾಧಿಕಾರಿಗಳ ನೇಮಕ ನಡೆಯಬೇಕಿತ್ತು. ಆದರೆ ದೇವಾಲಯಗಳಲ್ಲಿ ತ್ವರಿತವಾಗಿ ವ್ಯವಸ್ಥಾಪನಾ ಸಮಿತಿಗಳನ್ನು ಮರು ನೇಮಕಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖಾ ಆಯುಕ್ತರು ಈ ಕುರಿತು ಅಧಿಸೂಚನೆ ಸಹಿತ ಆದೇಶ ಹೊರಡಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News