ಯುವ ಕಾರ್ಯಕರ್ತರ ನೇಮಕಕ್ಕೆ ಸಂದರ್ಶನ

Update: 2019-06-25 15:56 GMT

ಉಡುಪಿ, ಜೂ.25: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿ ನೆಹರು ಯುವ ಕೇಂದ್ರವು ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಯುವ ಕಾರ್ಯಕರ್ತರನ್ನು ಪ್ರತಿ ತಾಲೂಕಿಗೆ ಇಬ್ಬರಂತೆ (ಉಡುಪಿಯ 7 ತಾಲೂಕುಗಳಿಗೆ) ಒಟ್ಟು 14 ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದೆ.

ಎಸೆಸೆಲ್ಸಿ/ಪಿಯುಸಿ/ವಿವಿ ಪದವಿ ವಿದ್ಯಾರ್ಹತೆ ಹೊಂದಿರುವ 29 ವರ್ಷ ದೊಳಗಿನ ಯುವಕ-ಯುವತಿಯರು ನೇಮಕಾತಿಗೆ ಅರ್ಹರು. ನೇಮಕಗೊಂಡ ಅ್ಯರ್ಥಿಗಳಿಗೆ 5,000 ರೂ. ಮಾಸಿಕ ಗೌರವಧನವನ್ನು ನೀಡಲಾಗುವುದು.

ನೇಮಕಾತಿಯ ನೇರ ಸಂದರ್ಶನ ಜೂನ್ 27ರಂದು ಬೆಳಗ್ಗೆ 10:30ಕ್ಕೆ ನೆಹರು ಯುವ ಕೇಂದ್ರ, ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಹತ್ತಿರ, ಜಿಲ್ಲಾಧಿಕಾರಿ ಕಛೇರಿ ಆವರಣ, ರಜತಾದ್ರಿ, ಮಣಿಪಾಲದಲ್ಲಿ ನಡೆಯಲಿದೆ.

ಆಸಕ್ತ ಹಾಗೂ ಅರ್ಹತೆ ಇರುವ ಅಭ್ಯರ್ಥಿಗಳು ವಿದ್ಯಾರ್ಹತೆ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಸೈಜ್ ಪೋಟೋ ಹಾಗೂ ಇತರ ದಾಖಲೆಯ ಮೂಲ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574992ನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News