ಪಶುಪಾಲಕರಿಂದ ಅರ್ಜಿ ಆಹ್ವಾನ

Update: 2019-06-25 17:10 GMT

ಮಂಗಳೂರು, ಜೂ.25: ದ.ಕ. ಜಿಪಂ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ 2019-20ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (ಘಟಕ ವೆಚ್ಚ 19,800 ರೂ.) 8,000 ರೂ. ಸಹಾಯಧನ ಮೂಲಕ ಮೇವು ಕತ್ತರಿಸುವ ಯಂತ್ರಗಳ ಸರಬರಾಜು ಯೋಜನೆಗೆ ಅರ್ಹ ಪಶುಪಾಲಕರಿಂದ ಅರ್ಜಿ ಅಹ್ವಾನಿಸಲಾಗಿದೆ.

ಮಾಹಿತಿಗಾಗಿ ಸ್ಥಳೀಯ ಪಶುವೈದ್ಯಾಧಿಕಾರಿ/ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂ.30ರೊಳಗೆ ಸಲ್ಲಿಸಲು ಉಪ ನಿರ್ದೇಶಕರು (ಆಡಳಿತ) ಪುಪಾಲನಾ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News