ಸಾಹಿತಿ ಟಿ.ಸತೀಶ್ ಜವರೇಗೌಡಗೆ ಎಸ್.ಕೆ.ಕರೀಂಖಾನ್ ಪ್ರಶಸ್ತಿ

Update: 2019-06-25 17:28 GMT

ಮಂಡ್ಯ, ಜೂ.25: ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ಡಾ.ಎಸ್.ಕೆ. ಕರೀಂಖಾನ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರಶಸ್ತಿಗೆ ಜಿಲ್ಲಾ ಯುವ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಾಹಿತಿ ಟಿ.ಸತೀಶ್‍ ಜವರೇಗೌಡ ಆಯ್ಕೆಯಾಗಿದ್ದಾರೆ.

ಜೂನ್ 30 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಲಯನ್ಸ್ ಸೇವಾ ಮಂದಿರದಲ್ಲಿ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ಪ್ರಥಮ ಕವಿಕಾವ್ಯ ಸಮ್ಮೇಳನದಲ್ಲಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಖ್ಯಾತ ಲೇಖಕಿ ಭಾನು ಮುಸ್ತಾಕ್ ಅವರು ಸತೀಶ್ ಜವರೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಟಿ.ಸತೀಶ್‍ ಜವರೇಗೌಡ ಅವರು ಸಲ್ಲಿಸಿರುವ ಎರಡು ದಶಕಗಳ ಸೇವಾ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರು ಪ್ರವೃತ್ತಿಯಲ್ಲಿ ಕ್ರಿಯಾಶೀಲ ಸಾಹಿತಿ ಮತ್ತು ಸಂಘಟಕರಾಗಿದ್ದು, ವೃತ್ತಿಯಲ್ಲಿ ಶಿಕ್ಷಕರಾಗಿ ಮೈಸೂರು ತಾಲೂಕಿನ ಮೆಲ್ಲಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News