ಜೂ.27ರಂದು ಭಟ್ಕಳದಲ್ಲಿ ಸಿಜಿಕೆ ರಂಗ ಪುರಸ್ಕಾರ

Update: 2019-06-25 17:38 GMT

ಭಟ್ಕಳ: ಸಿಜಿಕೆ ರಂಗ ಪುರಸ್ಕಾರ ಕಾರ್ಯಕ್ರಮ ಭಟ್ಕಳದ ದಿ ನ್ಯೂ ಇಂಗ್ಲೀಷ್ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ಜೂನ್ 27ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕ ಹಾಗೂ ಅಂಕೋಲಾದ ಸಂಗಾತಿ ರಂಗಭೂಮಿಯ ಕಾರ್ಯಾಧ್ಯಕ್ಷ ಕೆ.ರಮೇಶ್ ತಿಳಿಸಿದ್ದಾರೆ. 

ಅವರು ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ಬೀದಿನಾಟಕ ಅಕಾಡೆಮಿ, ಸಂಗಾತಿ ರಂಗಭೂಮಿ ಅಂಕೋಲಾ, ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು, ಪತ್ರಕರ್ತರ ಸಂಘ ಭಟ್ಕಳ, ದಿ ನ್ಯೂ ಇಂಗ್ಲೀಷ್ ಪದವಿ ಪೂರ್ವ ಕಾಲೇಜು ಮತ್ತು ಪ್ರಾರ್ಥನಾ ಪ್ರತಿಷ್ಠಾನ ಭಟ್ಕಳ ಇದರ ಸಹಯೋಗದಲ್ಲಿ ಸಿಜಿಕೆ ಬೀದಿ ರಂಗದಿನದ ಪ್ರಯುಕ್ತ ಸಿಜಿಕೆ ರಂಗ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ. 

ಈ ಪುರಸ್ಕಾರಕ್ಕೆ  ಭಟ್ಕಳದ ಹಿರಿಯ ರಂಗಕರ್ಮಿ ಅಶೋಕ ಮಹಾಲೆ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಭಟ್ಕಳ ತಾಲೂಕಿನಲ್ಲಿ ನಾಟಕ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕೆ.ಆರ್.ನಾಯ್ಕ, ಎಸ್.ಎನ್.ದೇವಡಿಗ, ರಾಮನಾಥ್ ಮಹಾಲೆ, ಗೋವಿಂದ ದೇವಡಿಗ, ನಝೀರ್ ಸಾಬ್ ಇವರಿಗೆ ಸನ್ಮಾನಿಸಿ ಗೌರವಿಸಲಿದೆ. 

ಕಾರ್ಯಕ್ರಮವು ಜೂನ್ 27ರಂದು ಭಟ್ಕಳದ ದಿ ನ್ಯೂ ಇಂಗ್ಲೀಷ್ ಪದವಿ ಪೂರ್ವ ಕಾಲೇಜಿನಲ್ಲಿ ಮುಂಜಾನೆ 10 ಗಂಟೆಗೆ ನಡೆಯಲಿದೆ. ಶಾಸಕ ಸುನೀಲ್ ನಾಯ್ಕ ಉದ್ಘಾಟಿಸಲಿದ್ದು, ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಿ ನ್ಯೂ ಇಂಗ್ಲೀಷ್ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ವೀರೇಂದ್ರ ಶಾನಭಾಗ , ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್, ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಮಚಂದ್ರ ಕಿಣಿ ಹಾಗೂ ಉದ್ಯಮಿ ರಾಘವೇಂದ್ರ ಎಮ್.ನಾಯ್ಕ ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕ ಹಾಗೂ ಅಂಕೋಲಾದ ಸಂಗಾತಿ ರಂಗಭೂಮಿಯ ಕಾರ್ಯಾಧ್ಯಕ್ಷ ಕೆ.ರಮೇಶ್ ತಿಳಿಸಿದ್ದಾರೆ. 

ಪತ್ರಿಕಾ ಗೋಷ್ಟಿಯಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಪತ್ರಕತ್ರ ಸಂಘದ ಅಧ್ಯಕ್ಷ ರಾಮಚಂದ್ರ ಕಿಣಿ, ನ್ಯೂ ಇಂಗ್ಲೀಷ್ ಪ.ಪೂ.ಕಾಲೇಜಿನ ಪ್ರಾಚಾರ್ಯ ವೀರೇಂದ್ರ ಶಾನಭಾಗ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News