ನಾರಾವಿ: ಬೈಕಿಗೆ ಲಾರಿ ಢಿಕ್ಕಿ; ಬೈಕ್ ಸವಾರ ಯುವಕ ಮೃತ್ಯು
Update: 2019-06-26 05:53 GMT
ಬೆಳ್ತಂಗಡಿ, ಜೂ.26: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ನಾರಾವಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಸಾವ್ಯ ಗ್ರಾಮದ ಕರಿಯ ಪೂಜಾರಿ ಎಂಬವರ ಪುತ್ರ ಪ್ರದೀಪ್ (19) ಮೃತಪಟ್ಟ ಯುವಕ. ಇವರು ಇಂದು ಬೆಳಗ್ಗೆ ಬೈಕಿನಲ್ಲಿ ತನ್ನ ಸಹೋದರನನ್ನು ನಾರಾವಿಗೆ ಬಿಟ್ಟು ಹಿಂದಿರುಗುತ್ತಿದ್ದ ಅಪಘಾತ ಸಂಭವಿಸಿದೆ.
ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.