ವೇಣೂರು: ಫಲ್ಗುಣಿ ನದಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ

Update: 2019-06-26 08:42 GMT

ಬೆಳ್ತಂಗಡಿ, ಜೂ.26: ವೇಣೂರು ಫಲ್ಗುಣಿ ನದಿ ಸಮೀಪದಲ್ಲಿ ಶಂಕಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

 ಮೃತರನ್ನು ವ್ಯಕ್ತಿ ಗುಣಪಾಲ್ (60) ಎಂದು ಗುರುತಿಸಲಾಗಿದೆ. ಗುಣಪಾಲ್ ಈ ಹಿಂದೆ ಸ್ಥಳೀಯ ಪಾರ್ಶ್ವನಾಥ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು ಸ್ಥಳೀಯರಿಗೆ ಚಿರಪರಿಚಿತರಾಗಿದ್ದರು.

ಇಂದು ಬೆಳಗ್ಗೆ ಗುಣಪಾಲ್ ಅವರ ಮೃತದೇಹ ನದಿಯಲ್ಲಿ ತೇಲುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸ್ಥಳೀಯರ ಮಾಹಿತಿಯಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News