ಗೃಹರಕ್ಷಕ ಹಮೀದ್ ಪಾವಲಗೆ ಸನ್ಮಾನ

Update: 2019-06-26 14:37 GMT

ಮಂಗಳೂರು, ಜೂ.26: ಮಂಗಳೂರು ಘಟಕದ ಗೃಹರಕ್ಷಕ ಹಮೀದ್ ಪಾವಲ ಅವರನ್ನು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಮೇರಿಹಿಲ್‌ನಲ್ಲಿ ಸನ್ಮಾನಿಸಲಾಯಿತು.

ಹಮೀದ್ ಪಾವಲ ತೊಕ್ಕೊಟ್ಟು ಬಸ್ ನಿಲ್ದಾಣ ಹತ್ತಿರ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೊಪಿಯನ್ನು ಹಿಡಿಯುವಲ್ಲಿ ಸಹಕರಿಸಿ, ಪೊಲೀಸ್ ಇಲಾಖೆಗೆ ನೆರವಾಗಿರುವುದರಿಂದ ಇವರ ಕರ್ತವ್ಯ ನಿಷ್ಠೆಯನ್ನು ಗುರುತಿಸಿ ಸನ್ಮಾನಿಸಿದರು.

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಮಾತನಾಡಿ, ಇಂತಹ ಗೃಹರಕ್ಷಕರಿಂದ ಇಲಾಖೆಯ ಗೌರವ ಹೆಚ್ಚುತ್ತದೆ. ಹಮೀದ್ ಪಾವಲ ಇತರ ಗೃಹರಕ್ಷಕರಿಗೆ ಮಾದರಿಯಾಗಿದ್ದು, ಅವರ ಸಮಯ ಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿದರು. ಇಂತಹ ಗೃಹರಕ್ಷಕರು ಸಮಾಜದ ಆಸ್ತಿ ಎಂದರು

ಸನ್ಮಾನ ಸ್ವೀಕರಿಸಿದ ಹಮೀದ್ ಪಾವಲ ಮಾತನಾಡಿ, ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದರು ಹೇಳಿದರು.
ಕಾರ್ಯಕ್ರಮದಲ್ಲಿ ಕಚೇರಿಯ ಅಧೀಕ್ಷಕ ಎಂ.ರತ್ನಾಕರ, ಪ್ರಥಮ ದರ್ಜೆ ಸಹಾಯಕ ಅನಿತಾ ಟಿ.ಎಸ್. ಹಾಗೂ ಬಂಟ್ವಾಳ ಘಟಕದ ಪ್ರಭಾರ ಘಟಕಾಧಿಕಾರಿ ಐತ್ತಪ್ಪ ಮತ್ತು ಗೃಹರಕ್ಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News