ನನ್ನ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿಯಿಂದ ನಿರಂತರ ಅಡ್ಡಿ: ಮುಖ್ಯಮಂತ್ರಿ ಕುಮಾರಸ್ವಾಮಿ
Update: 2019-06-27 12:40 GMT
ಬೆಂಗಳೂರು, ಜೂ. 27: ‘ಬಿಜೆಪಿ ಪ್ರಾಯೋಜಿತ ಗುಂಪುಗಳು ನನ್ನ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಅಡ್ಡಿಯುಂಟು ಮಾಡುವ ಪ್ರಯತ್ನ ನಿರಂತರವಾಗಿ ಮಾಡುತ್ತಿವೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಆರೋಪ ಮಾಡಿದ್ದಾರೆ.
‘ಇಂತಹ ಪ್ರಯತ್ನಗಳಿಂದ ನನ್ನ ಸ್ಥೈರ್ಯ ಕುಂದದು. ಜನರೊಂದಿಗೆ ಬೆರೆಯುವ, ಅರಿತುಕೊಳ್ಳುವ, ಸ್ಪಂದಿಸುವ ನನ್ನ ಕಾಯಕ ಹೀಗೆ ಮುಂದುವರಿಯುತ್ತದೆ’ ಎಂದು ಕುಮಾರಸ್ವಾಮಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.