ಪೊಲೀಸ್ ಇಲಾಖೆಗೆ ಕರಾವಳಿ ಯುವಜನರ ಸೇರ್ಪಡೆ ಅಗತ್ಯವಿದೆ: ಎಡಿಜಿಪಿ ಭಾಸ್ಕರ್ ರಾವ್

Update: 2019-06-27 16:34 GMT

ಮಲ್ಪೆ, ಜೂ. 27: ಕರಾವಳಿಯ ಜನತೆ ಹೆಚ್ಚು ಧೈರ್ಯಶಾಲಿಗಳು, ಬುದ್ದಿವಂತರು ಮತ್ತು ಇತರರಿಗೆ ಸ್ಪೂರ್ತಿ ತುಂಬುವವರು. ಇಂತಹ ಪ್ರದೇಶದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾದರೆ, ಇಲಾಖೆ ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಲು ಸಾಧ್ಯ ವಾಗುತ್ತದೆ ಎಂದು ಕೆಎಸ್‌ಆರ್‌ಪಿಯ ಎಡಿಜಿಪಿ ಭಾಸ್ಕರ್ ರಾವ್ ಹೇಳಿದ್ದಾರೆ.

ಗುರುವಾರ ಮಲ್ಪೆಯ ಏಳೂರು ಮೊಗವೀರ ಸಭಾಂಗಣದಲ್ಲಿ ಕರಾವಳಿ ಕಾವಲು ಪಡೆ, ಕೆಎಸ್‌ಆರ್‌ಪಿ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರಾವಳಿ ತೀರದ ಯುವಕ ಯುವತಿಯರಿಗೆ ಪೊಲೀಸ್ ಇಲಾಖೆಯಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪೊಲೀಸ್ ನೇಮಕಾತಿಯಲ್ಲಿ ಕರಾವಳಿ ಭಾಗದ ಜಿಲ್ಲೆಗಳ ಸ್ಥಳೀಯ ಅಭ್ಯರ್ಥಿಗಳು ಕಳೆದ 4-5 ವರ್ಷಗಳಿಂದ ನಿರಾಸಕ್ತಿ ತೋರುತ್ತಿದ್ದು, ಇದರಿಂದ ಬೇರೆ ಜಿಲ್ಲೆಯ ಅ್ಯರ್ಥಿಗಳು ನೇಮಕಗೊಳ್ಳುತಿದ್ದಾರೆ.ಕಾನೂನು ಸುವ್ಯವಸ್ಥೆಯು ಸ್ಥಳೀಯ ವಿಷಯವಾಗಿದ್ದು, ಇದನ್ನು ನಿಭಾಯಿಸಲು ಸ್ಥಳೀಯರ ಅವಶ್ಯಕತೆ ಹೆಚ್ಚಾಗಿರುತ್ತದೆ. ಬೇರೆ ಜಿಲ್ಲೆಗಳಿಂದ ನೇಮಕಗೊಂಡ ಸಿಬ್ಬಂದಿಗಳು ಸ್ಥಳೀಯ ಭಾಷೆ, ಸ್ಥಳಗಳ ಪರಿಚಯ, ಸಂಸ್ಕೃತಿ, ಅರಿಯಲು ಕೆಲವು ವರ್ಷಗಳು ಬೇಕಾಗಿದ್ದು, ಅಷ್ಟರಲ್ಲಿ ತಮ್ಮ ತವರು ಜಿಲ್ಲೆಗೆ ವರ್ಗಾವಣೆಯಾಗಿ ಹೋಗುವುದರಿಂದ ಇಲ್ಲಿ ಹುದ್ದೆಗಳು ಖಾಲಿ ಉಳಿದು, ಕಾನೂನು ಸುವ್ಯವಸ್ಥೆಗೆ ತೊಡಕಾಗಲಿದೆ ಎಂದರು.

ಕರಾವಳಿ ಭಾಗದಲ್ಲಿ 1624 ಪೊಲೀಸ್ ಕಾನ್‌ಸ್ಟೇಬಲ್ಸ್, 110 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಪೊಲೀಸ್ ನೇಮಕಾತಿ ಸಂಪೂರ್ಣ ಪಾರದರ್ಶಕತೆಯಿಂದ ನಡೆಯುತ್ತಿದೆ. ಯಾವುದೇ ರಾಜಕೀಯ ಒತ್ತಡ, ಶಿಪಾರಸ್ಸು, ಲಂಚ ಹಾಗೂ ಮಧ್ಯವರ್ತಿಗಳಿಗೆ ಅವಕಾಶವಿಲ್ಲ. ಮಧ್ಯವರ್ತಿಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಿದ ಭಾಸ್ಕರ ರಾವ್, ಈಗಾಗಲೇ ಮಧ್ಯವರ್ತಿಗಳಾಗಿ ಕೆಲಸ ಮಾಡಿದ ವ್ಯಕ್ತಿಗಳ ವಿರುದ್ದ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಲ್ಲದೇ ಇಲಾಖೆಯಲ್ಲಿ ಈ ಹಿಂದಿನಂತೆ ಅತ್ಯಧಿಕ ಕೆಲಸದ ಒತ್ತಡ ಇಲ್ಲ. ಈಗ ವೈಟ್‌ಕಾಲರ್ ಕ್ರೈಮ್ ಹೆಚ್ಚಾಗಿದ್ದು, ಬುದ್ದಿವಂತಿಕೆಯಿಂದ ಕೆಲಸ ಮಾಡ ಬೇಕಿದೆ. ಇಲಾಖೆಯಲ್ಲಿ ಉತ್ತಮ ವೇತನವಿದ್ದು, ಔರಾದಕರ್ ಸಮಿತಿಯ ಶಿಪಾರಸ್ಸುಗಳು ಜಾರಿಗೆ ಬಂದ ನಂತರ ಇನ್ನೂ ವೇತನ ಸೌಲಭ್ಯ ಉತ್ತಮಗೊಳ್ಳಲಿದೆ. ಸಿಬ್ಬಂದಿಗಳು ಮತ್ತು ಕುಟುಂಬ ವರ್ಗಕ್ಕೆ ಉಚಿತ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲ್ಯ, ವಸತಿ ಸೌಲ್ಯ ಸಹ ದೊರೆಯಲಿದೆ ಎಂದು ರಾವ್ ವಿವರಿಸಿದರು.

 ಇದರೊಂದಿಗೆ ಜನಸೇವೆ ಮತ್ತು ದೇಶಸೇವೆ ಮಾಡುವ ಅಮೂಲ್ಯ ಅವಕಾಶ, ನೊಂದವರಿಗೆ ನ್ಯಾಯ ಒದಗಿಸುವ ಅವಕಾಶ ನಿಮ್ಮದಾಗಲಿದೆ. ಉದ್ಯೋಗ ಮಾತ್ರವಲ್ಲದೇ ಸಾಹಸ ಜೀವನ ನಡೆಸಲು ಇಲಾಖೆಯಲ್ಲಿ ಸಾದ್ಯವಿದ್ದು, ಒಂದು ವಿಭಾಗದಲ್ಲಿ ಕರ್ತವ್ಯ ಸಾಕಾದಲ್ಲಿ ಇಲಾಖೆಯ ಇತರೆ ವಿಭಾಗಗಳಲ್ಲೂ ಸಹ ಕರ್ತವ್ಯ ನಿರ್ವಹಿಸಬಹುದು ಎಂದು ತಿಳಿಸಿದರು.

ಕರಾವಳಿ ಭಾಗದ ಯುವ ಜನತೆ ಪೊಲೀಸ್ ಇಲಾಖೆಗೆ ಸೇರ್ಪಡೆ ಯಾಗಲು ಅಗತ್ಯವಿರುವ ದೈಹಿಕ ಮತ್ತು ಲಿಖಿತ ಪರೀಕ್ಷೆ ಎದುರಿಸಲು ಬೇಕಾದ ತರಬೇತಿ ನೀಡುವ ಕುರಿತಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಕರಾವಳಿ ಪೊಲೀಸ್ ಪಡೆ, ಕೆಎಸ್‌ಆರ್‌ಪಿ ವತಿಯಿಂದ 5-6 ದಿನಗಳ ಉಚಿತ ತರಬೇತಿ ಶಿಬಿರವನ್ನು ಮಲ್ಪೆಯಲ್ಲಿಯೇ ಆಯೋಜಿಸಲಾಗುವುದು ಎಂದು ಭಾಸ್ಕರ ರಾವ್ ತಿಳಿಸಿದರು.

ಪೊಲೀಸ್ ನೇಮಕಾತಿ ಕುರಿತು ಇರುವ ಗೊಂದಲಗಳ ಕುರಿತು ಪ್ರಶ್ನಿಸಿದ ಉದಯ ಕೊಮೆ ತೆಕ್ಕಟ್ಟೆ, ಚೈತ್ರಾ ಕಟಪಾಡಿ, ಗೋಪಾಲ ಖಾರ್ವಿ, ಜಯರಾಜ್ ಬೈಂದೂರು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಭಾಸ್ಕರ್ ರಾವ್, ಇಲಾಖೆಯ ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿದ್ದು, ಪ್ರತಿಯೊಂದು ಆಯ್ಕೆ ಪ್ರಕ್ರಿಯೆ ಯನ್ನು ಸಹ ವೀಡಿಯೋ ದಾಖಲೀಕರಣ ಮಾಡಲಾಗುತ್ತದೆ. ಅ್ಯರ್ಥಿಗಳ ಎತ್ತರ, ತೂಕವನ್ನು ಎಲೆಕ್ಟ್ರಾನಿಕ್ ಯಂತ್ರದ ಮೂಲಕ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯ ಫಲಿತಾಂಶವನ್ನೂ ಕಂಪ್ಯೂಟರೀಕರಣಗೊಳಿಸಿದ್ದು ಯಾವುದೇ ವ್ಯಕ್ತಿ ಯ ಮಧ್ಯ ಪ್ರವೇಶ ಇಲ್ಲವಾಗಿದೆ ಎಂದರು.

 ಕರ್ನಾಟಕ ಪೊಲೀಸ್ ನೇಮಕಾತಿ ಪ್ರಕ್ರಿಯೆ ಇಡೀ ದೇಶಕ್ಕೆ ಮಾದರಿ ಯಾಗಿದ್ದು, ಈ ಆಯ್ಕೆ ಪಟ್ಟಿಯ ಕುರಿತು ನ್ಯಾಯಾಲಯದಲ್ಲಿ ಸಹ ಯಾವುದೇ ತಡೆ ಇದುವರೆಗೆ ಬಂದಿಲ್ಲ. ನೇಮಕಾತಿ ಕುರಿತಂತೆ ಗ್ರಾಮ ಮಟ್ಟದಲ್ಲಿ ಮತ್ತು ಕಾಲೇಜುಗಳಲ್ಲಿ ಸಹ ಮಾಹಿತಿ ನೀಡುವ ಕಾರ್ಯಕ್ರಮ ಏರ್ಪಡಿಸುವುದಾಗಿ ಅವರು ಹೇಳಿದರು.

ಕರ್ನಾಟಕ ಪೊಲೀಸ್ ನೇಮಕಾತಿ ಪ್ರಕ್ರಿಯೆ ಇಡೀ ದೇಶಕ್ಕೆ ಮಾದರಿ ಯಾಗಿದ್ದು, ಈ ಆಯ್ಕೆ ಪಟ್ಟಿಯ ಕುರಿತು ನ್ಯಾಯಾಲಯದಲ್ಲಿ ಸಹ ಯಾವುದೇ ತಡೆ ಇದುವರೆಗೆ ಬಂದಿಲ್ಲ. ನೇಮಕಾತಿ ಕುರಿತಂತೆ ಗ್ರಾಮ ಮಟ್ಟದಲ್ಲಿ ಮತ್ತು ಕಾಲೇಜುಗಳಲ್ಲಿ ಸಹ ಮಾಹಿತಿ ನೀಡುವ ಕಾರ್ಯಕ್ರಮ ಏರ್ಪಡಿಸುವುದಾಗಿ ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾತನಾಡಿ, ಕಳೆದ ತಿಂಗಳು ಉಡುಪಿಯಲ್ಲಿ ಪೊಲೀಸ್ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಅದರಲ್ಲಿ ಸಹ ಸ್ಥಳೀಯ ಅ್ಯರ್ಥಿಗಳು ಬೆರಳಣಿಕೆ ಯಷ್ಟಿದ್ದು, ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಕುರಿತಂತೆ ಹೆಚ್ಚಿನ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮ ಮತ್ತು ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹಾಸನ ಕೆಎಸ್‌ಆರ್‌ಪಿ ಕಮಾಂಡೆಂಟ್ ಕೃಷ್ಣಪ್ಪ, ಮಂಗಳೂರು ಕೆಎಸ್‌ಆರ್‌ಪಿ ಕಮಾಂಡೆಂಟ್ ಜನಾರ್ದನ್, ಉಡುಪಿ ಎಎಸ್ಪಿ ಕುಮಾರಚಂದ್ರ,ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಪಾರ್ಶ್ವನಾಥ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಉಪಸ್ಥಿತರಿದ್ದರು.

ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು. ಉಡುಪಿ ಡಿವೈಎಸ್ಪಿಜೈಶಂಕರ್ ವಂದಿಸಿದರು. ಕರಾವಳಿ ಕಾವಲು ಪಡೆಯ ಎಎಸೈ ಮನಮೋಹನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News