×
Ad

ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ: ಸಿಇಓ

Update: 2019-06-27 22:28 IST

ಉಡುಪಿ, ಜೂ.27: ಉಡುಪಿ ಜಿಲ್ಲೆಯಲ್ಲಿ ಇದೀಗ ಮಲೇರಿಯಾವು ನಿಯಂತ್ರಣದಲ್ಲಿದ್ದು, ಮಲೇರಿಯಾ ನಿರ್ಮೂಲನೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜನರ ಸಹಕಾರ ಅಗತ್ಯ ಎಂದು ಜಿಪಂನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ.

ಗುರುವಾರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಹಾಗೂ ಉಡುಪಿ ನಗರಸಭೆ ಸಹಯೋಗದಲ್ಲಿಹಮ್ಮಿಕೊಳ್ಳಲಾದ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ನಗರದ ಬೋರ್ಡ್ ಹೈಸ್ಕೂಲ್ ಆವರಣ ದಲ್ಲಿ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಲೇರಿಯಾವನ್ನು ನಿರ್ಮೂಲನೆಗೊಳಸಿಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಲೇರಿಯಾವನ್ನು ನಿರ್ಮೂಲನೆಗೊಳಸಿಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು. ಉಡುಪಿ ನಗರ ಸಭೆಯ ಆಯುಕ್ತ ಆನಂದ್ ಮಾತನಾಡಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲ್ಲಿ ಹೆಚ್ಚಿನ ಮಲೇರಿಯಾ ಪ್ರಕರಣಗಳು ಕಾರ್ಮಿಕರಲ್ಲಿ ಕಂಡು ಬರುತಿದ್ದು ಸ್ವಚ್ಚತೆಗೆ ಹೆಚ್ಚಿನ ಗಮನ ಕೊಡುವಂತೆ ಆರೋಗ್ಯ ಪರಿವೀಕ್ಷಕರಿಗೆ ಸೂಚಿಸಿದ್ದು, ಸಾರ್ವಜನಿಕರೂ ಸಹ ನಗರಸಭೆಯೊಂದಿಗೆ ಸಹಕರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಪ್ರಶಾಂತ್ ಭಟ್, ಚ್ಯವ್ಹನ ಡಯೊಗ್ನೋಸ್ಟಿಕ್ ಸೆಂಟರ್‌ನ ಪಿ.ಎ.ಭಟ್, ಧನ್ವಂತರಿ ನರ್ಸಿಂಗ್ ಕಾಲೇಜಿನ ಶಿವಪ್ರಸಾದ್, ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಸುದಿನ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ಕೆ. ಕೃಷ್ಣಪ್ಪ, ಕಿರಿಯ ಆರೋಗ್ಯ ನಿರೀಕ್ಷಕ ವಸಂತ್ ಕುಮಾರ್ ಹಾಗೂ ಪ್ರಸನ್ನ ಉಪಸ್ಥಿತರಿದ್ದರು.

 ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಪುರಭವನದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ಉಡುಪಿ ಆಸುಪಾಸಿನ ವಿವಿಧ ನರ್ಸಿಂಗ್ ಕಾಲೇಜು ಗಳ ವಿದ್ಯಾರ್ಥಿಗಳು, ಸರಕಾರಿ ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಹಾಗೂ ನಗರ ಆರೋಗ್ಯ ಕೇಂದ್ರ ಉಡುಪಿ ಮತ್ತು ಮಣಿಪಾಲದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News