×
Ad

ಮಂಗಳೂರು: ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2019-06-28 15:31 IST

ಮಂಗಳೂರು, ಜೂ. 28: ಜಿಲ್ಲೆಯ ನಡೆದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಉಳಾಯಿಬೆಟ್ಟು ನಿವಾಸಿ ಅನ್ಸಾರ್ ಎಂಬಾತನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಈತ ಕೆಲವು ಸಮಯದಿಂದ ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಉಳಾಯಿಬೆಟ್ಟುವಿನಲ್ಲಿ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ.

ಈತನ ಮೇಲೆ ಕಳೆದ 7 ವರ್ಷಗಳಿಂದ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News