ತಲೆಗೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

Update: 2019-06-28 13:30 GMT
ಕೊಲೆಯಾದ ರಾಕೇಶ್

ಮಂಡ್ಯ, ಜೂ.28: ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಚನ್ನಪಟ್ಟಣ ತಾಲೂಕು ಕುಕ್ಕೂರುದೊಡ್ಡಿ ಗ್ರಾಮದ ರಾಕೇಶ್ ಆಲಿಯಾಸ್ ರಾಖಿ (25) ಮೃತ ಯವಕ. ಈತ ಚನ್ನಪಟ್ಟಣದಿಂದ ವಡ್ಡರದೊಡ್ಡಿಗೆ ಬೈಕ್‍ನಲ್ಲಿ ಹೋಗುವಾಗ ನಾಲ್ವರು ಯುವಕರು ಈ ಕೃತ್ಯವೆಸಗಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.

ಕೆಸ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News