ಮಂಡ್ಯ: ಸ್ಮಶಾನದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

Update: 2019-06-28 13:35 GMT

ಮಂಡ್ಯ, ಜೂ.28: ಪರಿಶಿಷ್ಟ ಜನಾಂಗದವರಿಗೆ ಕಾಯ್ದಿರಿಸಿದ ಸ್ಮಶಾನಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ  ಜಿಲ್ಲಾಧಿಕಾರಿ ಎನ್. ಮಂಜುಶ್ರೀ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದ ಜನಾಂಗದ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದರು.

ಪರಿಶಿಷ್ಟ ಜಾತಿ ಜನಾಂಗದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ ಅವರಿಗೆ ನೀಡಬಹುದಾದ ಪರಿಹಾರವನ್ನು ಕೂಡಲೇ ನೀಡಲು ಸೂಕ್ತ ಕ್ರಮವಹಿಸಬೇಕು ಎಂದು ಅವರು ಅವರು ತಾಕೀತು ಮಾಡಿದರು.

ಪಾಂಡವಪುರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿವೇಶದ ತಾಂತ್ರಿಕ ದೋಷ ಸರಿಪಡಿಸಿ ನಿವೇಶನ ಮಂಜೂರು ಮಾಡಲು ಅಗತ್ಯ ಕ್ರಮವಹಿಸುವಂತೆ ಅವರು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News