×
Ad

ವಿಮಾನ ಜಾರಿದ ಪ್ರಕರಣ: ಉನ್ನತ ತನಿಖೆಗೆ ಸಚಿವ ಖಾದರ್ ಮನವಿ

Update: 2019-06-30 20:24 IST

ಮಂಗಳೂರು: ದುಬೈಯಿಂದ ಬಂದ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇಯಿಂದ ಜಾರಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುವಂತೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ‌ ಖಾದರ್ ಅವರು ಆಗ್ರಹಿಸಿದ್ದಾರೆ.

 ಈ ಸಂಬಂಧ ನಾಗರೀಕ ವಿಮಾನಯಾನ ಮಹಾ ನಿರ್ದೇಶಕ (ಡಿಜಿಸಿಎ)ರೊಂದಿಗೆ ಹಾಗೂ ಸಚಿವಾಲಯದೊಂದಿಗೆ  ಮಾತನಾಡಿರುವ ಸಚಿವರು, ಈ ಘಟನೆ ಪೈಲಟ್ ಅಥವಾ ವಿಮಾನದ ದೋಷದಿಂದ ಏರ್ ಪೋಟ್೯ ವ್ಯವಸ್ಥೆ ಯಲ್ಲಿ ಏನಾದರೂ ಕೊರತೆಯುಂಟಾಗಿದೆಯೇ ಎಂಬುದರ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕು. ಪ್ರಯಾಣಿಕರ ಸುರಕ್ಷಿತ ಪ್ರಯಾಣಕ್ಕೆ ಉತ್ಕೃಷ್ಟ ಕಾಳಜಿ ವಹಿಸಬೇಕು. ಕೂಡಲೇ ಈ ಬಗ್ಗೆ  ಸ್ಪಂದಿಸಲು ಸಚಿವ ಖಾದರ್ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News