ಕಾರು- ಬೈಕ್ ಢಿಕ್ಕಿ: ಮೂವರು ಸವಾರರಿಗೆ ಗಾಯ

Update: 2019-06-30 16:01 GMT

ಬೈಂದೂರು, ಜೂ.30: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸವಾರರು ಗಾಯಗೊಂಡ ಘಟನೆ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.29ರಂದು ಸಂಜೆ 7.20ರ ಸುಮಾರಿಗೆ ನಡೆದಿದೆ.

ಶಿರಸಿಯಿಂದ ಬಿದ್ಕಲ್ಕಟ್ಟೆ ಕಡೆಗೆ ಹೋಗುತ್ತಿದ್ದ ನವೀನ ರಾಮಚಂದ್ರ ಮೂರ್ತಿ ಎಂಬವರ ಕಾರಿಗೆ ಕುಂದಾಪುರ ಕಡೆಯಿಂದ ಏಕಮುಖ ಸಂಚಾರದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕಿನಲ್ಲಿದ್ದ ಮೂವರು ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News