ಮಟ್ಕಾ ಜುಗಾರಿ: ಇಬ್ಬರ ಬಂಧನ

Update: 2019-06-30 16:03 GMT

ಶಿರ್ವ, ಜೂ.30: ಪಾದೂರು ಗ್ರಾಮ ಕೊಲ್ಲಬೆಟ್ಟು ಬಸ್ ನಿಲ್ದಾಣದ ಹಿಂಬದಿಯಲ್ಲಿ ಜೂ.29ರಂದು ಸಂಜೆ ವೇಳೆ ಮಟ್ಕಾ ಜುಗಾರಿ ನಡೆಸುತ್ತಿದ್ದ ಪಾದೂರಿನ ಪ್ರಶಾಂತ್ ಪೂಜಾರಿ(32) ಎಂಬಾತನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡುಬಿದ್ರಿ: ಎಲ್ಲೂರು ಗ್ರಾಮದ ಮುದರಂಗಡಿಯ ಬಸ್ ನಿಲ್ದಾಣದ ಬಳಿ ಜೂ.29ರಂದು ಸಂಜೆ ವೇಳೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಉಚ್ಚಿಲ ಮುಳ್ಳಗುಡ್ಡೆಯ ಸುಭಾಷ್(38) ಎಂಬಾತನನ್ನು ಬಂಧಿಸಿ, 2080ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News