ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತ್ಯು
Update: 2019-06-30 22:45 IST
ಮಂಡ್ಯ, ಜೂ.30: ನೀರಿನಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯ ಕಾವೇರಿ ನದಿಯಲ್ಲಿ ಇಂದು ಸಂಜೆ ನಡೆದಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಸಮೀಪದ ಕಾವೇರಿ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ಬನ್ನೂರಿನ ಪ್ರತಿಮಾ(22), ಮಳವಳ್ಳಿಯ ದಿವ್ಯಾ(24) ಎಂದು ಗುರುತಿಸಲಾಗಿದೆ.
ಇವರಿಬ್ಬರೂ ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿಗಳಾಗಿದ್ದು, ಸಹೋದ್ಯೋಗಿಗಳ ಜೊತೆ ಪ್ರವಾಸಕ್ಕೆ ಬಂದಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.