ಬೈಕ್ ಗಳ ನಡುವೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Update: 2019-06-30 17:22 GMT

ಮಂಡ್ಯ, ಜೂ.30: ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಮದ್ದೂರು ಸಮೀಪದ ಶಿವಪುರ ಮೇಲ್ಸೇತುವೆ ಬಳಿ ನಡೆದಿದೆ.

ಅಪಘಾತದಲ್ಲಿ ಸುರೇಶ್(18) ಎಂಬಾತ ಮೃತಪಟ್ಟಿದ್ದು, ದೇಶಹಳ್ಳಿ ಗ್ರಾಮದ ದಾಸ (30) ಹಾಗೂ ಯೋಗ (19) ಎಂಬವವರಿಗೆ ಗಂಭೀರ ಗಾಯಗಳಾಗಿದೆ.

ಆಂಬ್ಯುಲೆನ್ಸ್ ಚಾಲಕ ಇಲ್ಲದ್ದಕ್ಕೆ ಸಾರ್ವಜನಿಕರ ಆಕ್ರೋಶ

ಆಂಬ್ಯುಲೆನ್ಸ್ ಚಾಲಕ ಇಲ್ಲದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಆಂಬ್ಯುಲೆನ್ಸ್ ಜಖಂಗೊಳಿಸಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಆಸ್ಪತ್ರೆ ಬಳಿ ನಡೆದಿದೆ.

ಮದ್ದೂರು ಸಮೀಪದ ಶಿವಪುರ ಮೇಲ್ಸೇತುವೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಅಲ್ಲಿನ ವೈದ್ಯರು ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಗೆ ಕರೆದೊಯ್ಯಲು ಸೂಚಿಸಿದ್ದು, ಅದರಂತೆ  ಸಂಬಂಧಿಕರು ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಈ ವೇಳೆ ಆಂಬ್ಯುಲೆನ್ಸ್ ಇದ್ದರೂ, ಚಾಲಕ ಸ್ಥಳದಲ್ಲಿರಲಿಲ್ಲ ಎನ್ನಲಾಗಿದ್ದು, ಇದರಿಂದ ಕೆರಳಿದ ಗಾಯಾಳುಗಳ ಸಂಬಂಧಿಕರು ಆಂಬ್ಯುಲೆನ್ಸ್ ಮೇಲೆ ದಾಳಿಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದರು ಎಂದು ತಿಳಿದುಬಂದಿದೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಚಾಲಕ ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿದ್ದಾನೆ ಎನ್ನಲಾಗಿದೆ. 

ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News