ಶ್ರೀನಗರ: ಓರ್ವ ಉಗ್ರನ ಹತ್ಯೆ

Update: 2019-06-30 18:42 GMT

ಶ್ರೀನಗರ, ಜೂ.30: ಜಮ್ಮು ಮತ್ತು ಕಾಶ್ಮೀರದ ಬುದ್‌ಗಾಂವ್ ಜಿಲ್ಲೆಯ ಚದೂರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

 ಈ ಪ್ರದೇಶದಲ್ಲಿ ಉಗ್ರರ ಚಲನವಲನದ ಬಗ್ಗೆ ದೊರೆತ ಮಾಹಿತಿಯನ್ವಯ ಸ್ಥಳಕ್ಕೆ ಧಾವಿಸಿದ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದೆ. ಆಗ ಭಯೋತ್ಪಾದಕರು ಭದ್ರತಾ ಪಡೆಗಳತ್ತ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳೂ ಪ್ರತ್ಯುತ್ತರ ನೀಡಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ . ಪ್ರದೇಶದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಆರ್‌ಪಿಎಫ್ ಅಧಿಕಾರಿ ವಿನಯ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News