ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-07-01 16:30 GMT

ಅಜೆಕಾರು, ಜು.1: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮರ್ಣೆ ಗ್ರಾಮದ ನಂದಾರು ನಿವಾಸಿ ಶಾರದ ಶೆಡ್ತಿ (76) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಜೂ.30ರಂದು ಮಧ್ಯಾಹ್ನ ಮನೆಯ ಸಮೀಪದಲ್ಲಿರುವ ಬಾವಿಯ ನೀರು ಸೇದುವ ಹಗ್ಗವನ್ನು ಕುತ್ತಿಗೆಗೆ ಬಿಗಿದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ನಿಟ್ಟೆ ಗ್ರಾಮದ ಅತ್ತೂರು ಕುರುಂಬಿಲಗುಡ್ಡೆಯ ಸಂಕಿ ಎಂಬವರ ಮಗಳು ಶಾಂತಿ(27) ಎಂಬವರು ಮಾನಸಿಕವಾಗಿ ನೊಂದು ಜೂ.30ರಂದು ರಾತ್ರಿ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News