ರಿವರ್ಸ್ ಆಪರೇಷನ್ ಮಾಡುವ ಶಕ್ತಿ ನಮ್ಮಲ್ಲಿದೆ: ದಿನೇಶ್ ಗುಂಡೂರಾವ್

Update: 2019-07-01 16:50 GMT

ಬೆಂಗಳೂರು, ಜು.1: ಬಿಜೆಪಿಯವರು ನಡೆಸಲು ಯತ್ನಿಸುತ್ತಿರುವ ಆಪರೇಷನ್ ಕಮಲಕ್ಕೆ ತಿರುಗೇಟು(ರಿವರ್ಸ್ ಆಪರೇಷನ್) ನೀಡುವ ಶಕ್ತಿ ನಮ್ಮಲ್ಲಿದೆ. ಅದಕ್ಕಾಗಿ ನಾವು ಸಿದ್ಧರಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದ ಸಮ್ಮಿಶ್ರ ಸರಕಾರ ಬೀಳುವುದಿಲ್ಲ. ಬಿಜೆಪಿಯವರು ಸರಕಾರವನ್ನು ಬೀಳಿಸಲು ನಿರಂತರವಾಗಿ ಪ್ರಯತ್ನಿಸುತ್ತಲೇ ಇದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಹೊರಗಿಟ್ಟು ಕೇಂದ್ರದವರೇ ಈ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಏನೇ ಮಾಡಿದರೂ ಸರಕಾರಕ್ಕೆ ಏನು ಆಗುವುದಿಲ್ಲ. ಬಿಜೆಪಿಯವರು ಇನ್ನು ಏನೇನು ಮಾಡುತ್ತಾರೋ ನೋಡೋಣ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಯಡಿಯೂರಪ್ಪರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಅನ್ನೋದಷ್ಟೇ ಬೇಕಾಗಿದೆ. ನಮಗೂ ಶಕ್ತಿಯಿದೆ. ಬಿಜೆಪಿಯವರ ಆಪರೇಷನ್‌ಗೆ ರಿವರ್ಸ್ ಆಪರೇಷನ್ ಮಾಡುತ್ತೇವೆ. ಇದಕ್ಕಾಗಿ ನಾವು ಸಿದ್ಧರಿದ್ದೇವೆ. ನಮ್ಮಲ್ಲಿ ಯಾರೂ ಅತೃಪ್ತ ಶಾಸಕರಿಲ್ಲ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News