ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಕೊಲೆ ಆರೋಪ

Update: 2019-07-01 17:27 GMT

ಮೈಸೂರು,ಜು.1: ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯರಗನಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದೆ.

ಮೃತಳನ್ನು ಸೌಮ್ಯ ಎಂದು ಹೇಳಲಾಗಿದ್ದು, ತನ್ನ ಪತಿ ಶಿವು ಅವರ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಒಂದು ವರ್ಷಗಳ ಹಿಂದೆ ಮಾಸ್ಟ್ ಹಳ್ಳಿಯಿಂದ ಯರಗನಹಳ್ಳಿಯ ಶಿವು ಎಂಬಾತನಿಗೆ ಅದ್ದೂರಿಯಾಗಿ ವಿವಾಹ ಮಾಡಿಕೊಡಲಾಗಿತ್ತು. ಶಿವು ಪದೇ ಪದೇ ವರದಕ್ಷಿಣೆ ತರುವಂತೆ ಸೌಮ್ಯಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಸೌಮ್ಯ ವರದಕ್ಷಿಣೆ ತರಲು ನಿರಾಕರಿಸಿದ್ದಕ್ಕೆ ಆಕೆಯನ್ನು ಹೊಡೆದು ನೇಣು ಹಾಕಲಾಗಿದೆ ಎಂದು ಸೌಮ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ಆಲನಹಳ್ಳಿಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News