ಮುಂಬೈನಲ್ಲಿ ಮಹಾಮಳೆ: ಆವರಣ ಗೋಡೆ ಕುಸಿದು 14 ಸಾವು

Update: 2019-07-02 06:00 GMT

ಮುಂಬೈ, ಜು.2: ಮುಂಬೈ ಮಹಾನಗರದಲ್ಲಿ ಭಾರೀ ಮಳೆಯಿಂದಾಗಿ ಮಲಾಡ್ ಪ್ರದೇಶದ ಆವರಣ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ 14 ಮಂದಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಆವರಣಗೋಡೆ ಕುಸಿತದಿಂದಾಗಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮಳೆಯಿಂದಾಗಿ ಮುಂಬೈಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈಲು ಹಾಗೂ ವಿಮಾನಗಳ ಓಡಾಟ ಸ್ಥಗಿತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News