ಮುಖ್ಯಮಂತ್ರಿ ಕುರಿತು ಅವಹೇಳನಕಾರಿ ಹೇಳಿಕೆ: ಪ್ರಸನ್ನಾನಂದಪುರಿ ಸ್ವಾಮೀಜಿ ವಿರುದ್ಧ ದೂರು

Update: 2019-07-02 16:16 GMT

ಬೆಂಗಳೂರು, ಜು.2: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ದಾವಣಗೆರೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಕೀಲ ಅಮೃತೇಶ್ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

'ಜೂ.25 ರಂದು ವಾಲ್ಮೀಕಿ ಸಮುದಾಯದ ಮೀಸಲಾತಿ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಸಮುದಾಯದ ಶಾಸಕರು ರಾಜೀನಾಮೆ ಸಲ್ಲಿಸಿ. ಬಳಿಕ ಕುಮಾರಸ್ವಾಮಿ ನನ್ನ ಮಾತು ಕೇಳುತ್ತಾರೆ ಎಂದೆಲ್ಲಾ ಅವಹೇಳನಕಾರಿ ಮಾತುಗಳನ್ನು ಹೇಳಿದ್ದಾರೆ. ಇದರಿಂದ ಸಾಂವಿಧಾನಿಕ ಸ್ಥಾನಕ್ಕೆ ಅಪಮಾನವಾಗಿದ್ದು, ಇದಕ್ಕೆ ಭೀಮಾ ನಾಯ್ಕ್ ಕೈ ಜೋಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಬ್ಬರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ ಎಂದು ಅಮೃತೇಶ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News