ಯಾರು ರಾಜೀನಾಮೆ ಕೊಟ್ಟರೂ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಿಲ್ಲ: ಶಾಮನೂರು ಶಿವಶಂಕರಪ್ಪ

Update: 2019-07-02 18:34 GMT

ದಾವಣಗೆರೆ, ಜು.2: ಸಮ್ಮಿಶ್ರ ಸರ್ಕಾರ ಐದು ವರ್ಷ ಅವಧಿ ಪೂರೈಸಲಿದ್ದು, ಯಾರು ರಾಜೀನಾಮೆ ಕೊಟ್ಟರೂ ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗುವುದಿಲ್ಲ. ಎಂದು ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಯಾರೂ ರಾಜೀನಾಮೆ ನೀಡುವುದಿಲ್ಲ. ಒಂದು ವೇಳೆ ರಾಜೀನಾಮೆ ನೀಡಿದರೂ ನಮ್ಮ ಸರ್ಕಾರಕ್ಕೆ ಯಾವುದೇ ತೊಂದರೆಯೂ ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದೆ. ಗಟ್ಟಿಯಾಗಿಯೇ ಇರುತ್ತದೆ ಎಂದರು. 

ಮುಖ್ಯಮಂತ್ರಿ ಕುಮಾರಸ್ವಾಮಿ ವಿದೇಶಕ್ಕೆ ಹೋದರೆ ವಾಪಾಸ್ ಬರ್ತಾರೆ. ಸಿಎಂ ವಿದೇಶ ಪ್ರವಾಸ ಹೋದರೆ ಸರ್ಕಾರ ತೊಂದರೆಯಲ್ಲಿದೆ ಎಂದರ್ಥವಲ್ಲ. ನಮ್ಮ ಸರ್ಕಾರವು ಸುಭದ್ರವಾಗಿದ್ದು, ಯಾವುದೇ ಅಪಾಯವೂ ಸರ್ಕಾರಕ್ಕಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News