ಮಾಣಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು

Update: 2019-07-03 06:04 GMT

ಬಂಟ್ವಾಳ, ಜು.3: ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ನಗ, ನಗದು ಕಳವು ಮಾಡಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದ್ದು, ಕೃತ್ಯವು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಹೆದ್ದಾರಿ 74ರ ಗಡಿಯಾರ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಮುಹಮ್ಮದ್ ರಫೀಕ್ ಎಂಬವರ ಬಾಡಿಗೆ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ಮುಹಮ್ಮದ್ ರಫೀಕ್ ಅವರು ಹಂಝ ಎಂಬವರ ಬಾಡಿಗೆ ಮನೆಯಲ್ಲಿ ಕುಟುಂಬ ಸಹಿತ ವಾಸವಾಗಿದ್ದರು. ಮಂಗಳವಾರ ರಾತ್ರಿ 9 ಗಂಟೆಗೆ ಮನೆಯವರೆಲ್ಲರೂ ಉಪ್ಪಿನಂಗಡಿಯ ಶಾಂತಿನಗರ ಎಂಬಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ವಾಪಸ್ ಮನೆಗೆ ಬಂದಾತ ಈ ಘಟನೆ ಬೆಳಕಿಗೆ ಬಂದಿದೆ.

ಮನೆಯ ಕೊಠಡಿಯ ಕಪಾಟಿನಲ್ಲಿದ್ದ 35 ಪವನ್ ಚಿನ್ನ ಹಾಗೂ 1 ಲಕ್ಷ ರೂ. ನಗದು ಕಳವು ಮಾಡಲಾಗಿದೆ ಎಂದು ಮನೆಮಂದಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಎಸ್ಸೈ ಯಲ್ಲಪ್ಪ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News