ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2019-07-03 16:50 GMT

ಉಡುಪಿ, ಜು.3: ಗಾಂಜಾ ಸೇವನೆಗೆ ಸಂಬಂಧಿಸಿ ಉಡುಪಿ ಡಿಸಿಐಬಿ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡ ಘಟನೆ ಜು.2ರಂದು ಬೆಳಗ್ಗೆ 11 ಗಂಟೆಗೆ ಕೊರಂಗ್ರಪಾಡಿ ಸಾಯಿಬಾಬ ಮಂದಿರದ ಬಳಿ ನಡೆದಿದೆ.

ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗಾಂಜಾ ಸೇವನೆ ಮಾಡಿದ್ದ ಕೊರಂಗ್ರಪಾಡಿ ಮಾರ್ಪಳ್ಳಿಯ ಪ್ರವೀಣ್(42) ಎಂಬಾತ ನನ್ನು ವಶಕ್ಕೆ ತೆಗೆದುಕೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ಮುಂದೆ ಹಾಜರು ಪಡಿಸಿದರು. ಪರೀಕ್ಷೆ ವೇಳೆ ಪ್ರವೀಣ್ ಗಾಂಜಾ ಸೇವನೆ ಮಾಡಿರುವುದು ದೃಢ ಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News