ಭಿನ್ನಮತೀಯ ಶಾಸಕರನ್ನು ತಡೆಯುವುದಿಲ್ಲ: ಡಾ.ಜಿ.ಪರಮೇಶ್ವರ್

Update: 2019-07-04 13:28 GMT

ಬೆಂಗಳೂರು, ಜು.4: ಭಿನ್ನಮತೀಯ ಶಾಸಕರು ರಾಜೀನಾಮೆ ನೀಡುವುದಾದರೆ ನೀಡಲಿ. ಎಲ್ಲದಕ್ಕೂ ಒಂದು ಹಂತ ಇರುತ್ತದೆ. ಅದು ಮೀರಿದರೆ ಯಾರು ಏನು ಮಾಡುವುದಕ್ಕೂ ಆಗುವುದಿಲ್ಲವೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಮೆರಿಕಾದಿಂದ ಬಂದ ಬಳಿಕ ಜೆಡಿಎಸ್-ಕಾಂಗ್ರೆಸ್‌ನ ಒಬ್ಬೊಬ್ಬರೆ ಶಾಸಕರೊಂದಿಗೆ ಮಾತನಾಡುತ್ತೇವೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರು ತಮ್ಮ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪ್ರತ್ಯೇಕವಾಗಿಯೇ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News