ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಮೃತ್ಯು

Update: 2019-07-04 15:50 GMT

ಬೆಂಗಳೂರು, ಜು.4: ಮದ್ಯದ ಅಮಲಿನಲ್ಲಿ ಕಾರ್ಮಿಕನೊಬ್ಬ ಮನೆಯ ಎರಡನೆ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಮಣಿಪುರಂ ಮೂಲದ ಚುನ್ನಿತಾಂ(28) ಮೃತ ಕಾರ್ಮಿಕ ಎಂದು ಪೊಲೀಸರು ತಿಳಿಸಿದ್ದಾರೆ.

ಕೋರಮಂಗಲದ ಹೊಟೇಲ್‌ವೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಚುನ್ನಿತಾಂ, ಆಡುಗೋಡಿಯ ಭಾವನ ಮನೆಯಲ್ಲಿ ವಾಸವಾಗಿದ್ದ. ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗದೆ ರಾಜೇಂದ್ರ ನಗರದಲ್ಲಿದ್ದ ಸ್ನೇಹಿತನ ಮನೆಗೆ ಹೋಗಿದ್ದ ಚುನ್ನಿತಾಂ, ಮದ್ಯ ಸೇವಿಸಿದ್ದ ಎನ್ನಲಾಗಿದೆ.

ಸ್ನೇಹಿತನ ಜೊತೆ ಮಾತನಾಡುತ್ತಾ, ಮನೆಯ ಎರಡನೆ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News