ದನಕ್ಕೆ ಬೈಕ್ ಢಿಕ್ಕಿ: ಸಹಸವಾರ ಮೃತ್ಯು

Update: 2019-07-04 16:11 GMT

ಬೈಂದೂರು, ಜು.4: ನಾವುಂದ ಗ್ರಾಮದ ಚೋದ್ರಿ ಅಂಗಡಿ ಬಳಿ ಜು.3 ರಂದು ರಾತ್ರಿ 9.25ರ ಸುಮಾರಿಗೆ ಬೈಕೊಂದು ದನಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹಿಂಬದಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿ ಯಾಗಿದೆ.

ಮೃತರನ್ನು ರಾಜಸ್ಥಾನ ಮೂಲದ ಗೋಪಾಲ (21) ಎಂದು ಗುರುತಿಸ ಲಾಗಿದೆ. ಬೈಕ್ ಸವಾರ ಸಣ್ಣ ಪುಟ್ಟ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಇವರಿಬ್ಬರು ನಾವುಂದದಲ್ಲಿ ಟೈಲ್ಸ್ ಕೆಲಸ ಮಾಡಿಕೊಂಡಿದ್ದಾರೆ.

ಯರೂಕೊಣೆಯಿಂದ ನಾವುಂದ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆ ಬದಿ ಯಲ್ಲಿದ್ದ ದನಕ್ಕೆ ಡಿಕ್ಕಿ ಹೊಡೆದು ನಂತರ ಅಲ್ಲೇ ಸಮೀಪದ ವಿದ್ಯುತ್ ಕಂಬಕ್ಕೆ ಮೋಟಾರು ಸೈಕಲ್ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗೋಪಾಲ ಅವರ ತಲೆ ವಿದ್ಯುತ್ ಕಂಬಕ್ಕೆ ಬಡಿಯಿತು.

ಇದರಿಂದ ಗಂಭೀರ ವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News