ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ: ಕೇಂದ್ರ ಸಚಿವ ಸದಾನಂದ ಗೌಡ ಅಭಿನಂದನೆ

Update: 2019-07-04 16:30 GMT

ಬೆಂಗಳೂರು, ಜು.4: ಪ್ರಾದೇಶಿಕ ಗ್ರಾಮೀಣ ಬ್ಯಾಂಕಿಂಗ್ ಸೇವೆ ನೇರ ನೇಮಕಾತಿಗೆ ಕನ್ನಡದಲ್ಲಿಯೆ ಪರೀಕ್ಷೆ ಬರೆಯಲು ಕೇಂದ್ರ ಸರಕಾರ ಅನುವು ಮಾಡಿಕೊಟ್ಟಿದ್ದಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆಯನ್ನು ಕೇಂದ್ರ ಹಣಕಾಸು ಇಲಾಖೆ ನೆರವೇರಿಸಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಸಂಸದರುಗಳೊಂದಿಗೆ ನಿಯೋಗ ತೆರಳಿ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದೆವು. ಹಾಗೆಯೆ ಕನ್ನಡ ಸಾಹಿತಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತಿತರ ನಿಯೋಗಗಳು ಮನವಿ ಮಾಡಿದ್ದವು. ಒಟ್ಟಾರೆ ಎಲ್ಲರ ಪ್ರಯತ್ನಕ್ಕೆ ಇಂದು ಜಯ ಸಿಕ್ಕಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News