ಮಾಜಿ ಶಾಸಕ ಗೋಪಾಲ ಭಂಡಾರಿಗೆ ಅಂತಿಮ ನಮನ

Update: 2019-07-05 11:02 GMT

ಉಡುಪಿ: ಗುರುವಾರ ನಿಧನರಾದ ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಅವರಿಗೆ ಕಾರ್ಕಳದ ಕಿಸಾನ್ ಭವನದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು ಅಂತಿಮ ನಮನ ಸಲ್ಲಿಸಿದರು.  

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ , ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ,  ಪ್ರಮೋದ್ ಮಧ್ವರಾಜ್, ಶಾಸಕ ಸುನಿಲ್ ಕುಮಾರ್,  ಮಾಜಿ ಶಾಸಕ ಯು.ಆರ್. ಸಭಾಪತಿ ಮೊದಲಾದವರು ಅಂತಿಮ ನಮನ ಸಲ್ಲಿಸಿದರು.

ಮಾಜಿ ಶಾಸಕ ಎಚ್ .ಗೋಪಾಲ್ ಭಂಡಾರಿ ಅವರ ಪ್ರಾರ್ಥಿವ ಶರೀರದ ಅಂತಿಮ ದರ್ಶನ ಹೆಬ್ರಿಯ ಪ್ರಥಮ ದರ್ಜೆ ಕಾಲೇಜಿನ ಹೊರಾಂಗಣದ ಸಭಾಂಗಣದಲ್ಲಿ  ಸಕಲ ಸರಕಾರಿ ಗೌರವಗಳೊಂದಿಗೆ ವ್ಯವಸ್ಥೆ ಮಾಡಲಾಗಿದೆ .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News