ಹಿಂದುಳಿದ ವರ್ಗಗಳ ಕಾನೂನು ಪದವೀಧರಿಗೆ ತರಬೇತಿಗೆ ಅರ್ಜಿ ಆಹ್ವಾನ

Update: 2019-07-05 15:50 GMT

ಉಡುಪಿ, ಜು.5: 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವ ಕಾನೂನು ಪದವೀಧರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿಗಳಿಗೆ ಸೇರಿದವರಾಗಿರಬೇಕು. ಪ್ರವರ್ಗ-1ಕ್ಕೆ 3,50,000 ರೂ. ಹಾಗೂ ಇತರೆ ಪ್ರವರ್ಗಗಳಿಗೆ ಸೇರಿದ ಅ್ಯರ್ಥಿ ಪೋಷಕರ ಕುಟುಂಬದ ವಾರ್ಷಿಕ ಆದಾಯವು 2,50,000 ರೂ.ಗಳ ಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಿಂದ ಹಿಂದಿನ ಎರಡು ವರ್ಷಗಳೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ- 1, 2ಎ, 3ಎ, ಮತ್ತು 3ಬಿ, ಗೆ ಸೇರಿದ ಅ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ದಂದು ಗರಿಷ್ಠ 38 ವರ್ಷಗಳ ವಯೋಮಿತಿಯಲ್ಲಿ ಇರಬೇಕು.

ಅಭ್ಯರ್ಥಿಗಳು ತಮ್ಮ ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೊಂದಾಯಿಸಿರಬೇಕು. ತರಬೇತಿಗೆ ಆಯ್ಕೆಯಾಗುವ ಅ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳ ವರೆಗೆ ಮಾಹೆಯಾನ 4,000 ರೂ.ಗಳಂತೆ ಶಿಷ್ಯ ವೇತನ ನೀಡಲಾಗುವುದು.

ಅರ್ಜಿಗಳನ್ನು ಆವಶ್ಯವಿರುವ ದಾಖಲಾತಿಗಳೊಡನೆ ಜುಲೈ 22ರೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತುತಿ ಅಲ್ಪಸಂಖ್ಯಾತರ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ, ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2574881, 2573881ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News